Wednesday, December 17, 2025
Google search engine

Homeಅಪರಾಧಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

ಕೋರ್ಟ್ ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಮಂಗಳೂರಿನ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂದು ಗುರುತಿಸಲಾಗಿದೆ. ಉಪ್ಪಳದ ಅಬ್ದುಲ್ ರವೂಫ್ @ ಮೀಸೆ ರವೂಫ್ ಮೇಲೆ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿತ್ತು ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿತ್ತು. ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು ಹಾಗೂ ಕೊಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿತ್ತು. ಮಂಜೇಶ್ವರ ಪೊಲೀಸ್ ಠಾಣಾ ಒಂದು ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು.
ಈತನು ಅಂತರಾಜ್ಯ ನಟೋರಿಯಸ್ ಕ್ರಿಮಿನಲ್ ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ @ ಜಿಯಾ ಎಂಬಾತನ ಸಹಚರನಾಗಿರುತ್ತಾನೆ. ಈತನನ್ನು ಉತ್ತರ ಉಪ ವಿಭಾಗದ ಎ.ಸಿ.ಪಿ ಯವರಾದ ಶ್ರೀ ಶ್ರೀಕಾಂತ. ಕೆ. ರವರ ನೇತೃತ್ವದ ತಂಡದವರಾದ ಶ್ರೀ ಚಂದ್ರಶೇಖರ್, ಎ.ಎಸ್.ಐ, ಸಿಬ್ಬಂದಿಗಳಾದ ಹೆಚ್.ಸಿ .ರೆಜಿ ವಿ.ಎಂ , ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ರವರು ಈ ದಿನ ದಿನಾಂಕ:16-12-2025 ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

RELATED ARTICLES
- Advertisment -
Google search engine

Most Popular