Friday, December 19, 2025
Google search engine

Homeರಾಜ್ಯಹುಣಸೆ, ಹಲಸು ಮತ್ತು ನೇರಳೆ ಮುಂತಾದ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಬಗ್ಗೆ...

ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಬಗ್ಗೆ ಪ್ರಸ್ತಾಪ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು. 

ಮಾಜಿ ಪ್ರಧಾನಿ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ. ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ. ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ. ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಕೃಷಿ ಸಚಿವರ ಗಮನಸೆಳೆದರು.

ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ, ಹಲಸು ಮತ್ತು ನೇರಳೆಗಳನ್ನು ಪ್ರಧಾನವಾಗಿ ಭಾರತದ ದಕ್ಷಿಣ, ಮಧ್ಯ, ಮತ್ತು ಪೂರ್ವ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಭಾರತವು ಈ ಹಣ್ಣುಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಏಷ್ಯಾದ ಕೆಲ ದೇಶಗಳು ಮತ್ತು ಆಫ್ರಿಕನ್ ದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕೃಷಿ ಕಂಡುಬರುತ್ತದೆ ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದಲ್ಲಿರುವ ಕೃಷಿ ಪದ್ಧತಿಗಳನ್ನು ಉಲ್ಲೇಖಿಸುತ್ತಾ ವಿವರ ನೀಡಿರುವ ದೇವೇಗೌಡರು, ಸಾಂಪ್ರದಾಯಿಕವಾಗಿ ಈ ಬೆಳೆಗಳನ್ನು ಬೀಜಗಳನ್ನು ನೆಟ್ಟು ಬೆಳೆಯಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಕಸಿ ಮಾಡಿದ ಸಸಿಗಳು ಸಾಮಾನ್ಯವಾಗಿದ್ದು, ಇಳುವರಿ ಮತ್ತು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಗಮನಿಸಿದರು. ಪ್ರತಿ ವರ್ಷ ದೊಡ್ಡ ಪ್ರಮಾಣದ ಉತ್ಪಾದನೆ ಮತ್ತು ಕೊಯ್ಲು ಮಾಡುತ್ತಿದ್ದರೂ ಹಣ್ಣುಗಳ ಗಮನಾರ್ಹ ಭಾಗವು ಕೊಯ್ಲು ಮಾಡದೆ ಮತ್ತು ಕಡಿಮೆ ಬಳಕೆಯಲ್ಲಿವೆ. ಕೊಯ್ಲು ಮಾಡುವಲ್ಲಿನ ತೊಂದರೆ, ಖರೀದಿದಾರರ ಕೊರತೆ, ಅಸಮರ್ಪಕ ಸಂಸ್ಕರಣಾ ಸೌಲಭ್ಯಗಳು ಮತ್ತು ದೇಶಾದ್ಯಂತ ಬೆಳೆಗಾರರಿಗೆ ಶೀತಲೀಕರಣ ಕೇಂದ್ರಗಳಿಗೆ ಸೀಮಿತ ಪ್ರವೇಶದಂತಹ ಸವಾಲುಗಳು ಇದಕ್ಕೆ ಕಾರಣವೆಂದು ಹೇಳಿದರು.

ಈ ಹಣ್ಣುಗಳು ಮತ್ತು ಅವುಗಳ ಉಪ ಉತ್ಪನ್ನಗಳು ಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿವೆ. ಈ ಬೆಳೆಗಳನ್ನು ಹೆಚ್ಚಿನ ಆದಾಯ ಗಳಿಸುವ, ‘ಡಾಲರ್ ಗಳಿಸುವ’ ಬೆಳೆಗಳೆಂದು ಕೃಷಿ ಸಚಿವರ ಗಮನ ಸೆಳೆದರು. ಅಲ್ಲದೆ, ಇದು ರಾಷ್ಟ್ರೀಯ ಆರ್ಥಿಕತೆಗೆ ಕೊಡುಗೆ ನೀಡುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.

RELATED ARTICLES
- Advertisment -
Google search engine

Most Popular