Monday, February 23, 2026
Google search engine

Homeಅಪರಾಧಬೆದರಿಕೆ ಪತ್ರ ಕಳುಹಿಸಿದ ಆರೋಪ; ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

ಬೆದರಿಕೆ ಪತ್ರ ಕಳುಹಿಸಿದ ಆರೋಪ; ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬುವರ ಮನೆಗೆ ಬೆದರಿಕೆ ಪತ್ರ ಕಳುಹಿಸಿದ ಆರೋಪದಡಿ ಬಸವೇಶ್ವರ ನಗರ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಮೈಲಾರಪ್ಪ ಎಂಬವರ ಮೇಲೆ ನೀಡಿರುವ ದೂರು ವಾಪಸ್ ತೆಗೆದುಕೊಳ್ಳಲು ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಕಳೆದೆರಡು ತಿಂಗಳ ಹಿಂದೆ ದೂರು ಕೊಟ್ಟಿದ್ದು, ಎನ್​ಸಿಆರ್ ಕೂಡ ದಾಖಲಾಗಿತ್ತು. ಇದೀಗ ಕೋರ್ಟ್ ಅನುಮತಿ ಪಡೆದು ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular