Friday, February 27, 2026
Google search engine

Homeರಾಜಕೀಯಬಿಜೆಪಿಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಬಿಜೆಪಿಗೆ ತಿರುಗೇಟು ನೀಡಿದ ಕಾಂಗ್ರೆಸ್

ಬಿಜೆಪಿಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಬಿಜೆಪಿಗೆ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ರಾಹುಲ್ ಗಾಂಧಿ ಜನನಾಯಕರು. ಅವರ ಹೆಚ್ಚುತ್ತಿರುವ ಜನಪ್ರಿಯತೆಯಿಂದ ಬಿಜೆಪಿ ಆತಂಕಗೊಂಡಿದೆ. ಅದಕ್ಕಾಗಿ ವೈಯಕ್ತಿಕ ದಾಳಿಗಳಿಗೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಸಾರ್ವಜನಿಕ ಹಿತಾಸಕ್ತಿಯ ಪ್ರಶ್ನೆಗಳನ್ನು ಎತ್ತುತ್ತಿರುವ ಕಾಂಗ್ರೆಸ್ ಧ್ವನಿಯನ್ನು ಮೌನಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವುದನ್ನು ಬಿಟ್ಟು ಆರೋಪಗಳ ರಾಜಕೀಯ ನಡೆಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಅಮೆರಿಕಾದ ಸುಪ್ರೀಂ ಕೋರ್ಟ್ ಕೆಲವು ಸುಂಕಗಳನ್ನು ರದ್ದುಪಡಿಸಿರುವ ವರದಿಗಳು ಕೇಳಿ ಬಂದಿದ್ದು, ಈ ಬಗ್ಗೆ ಕೇಂದ್ರದ ನಿಲುವು ಏನು ಎಂದು ಪ್ರಶ್ನಿಸಿದರಲ್ಲದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವು 500 ಬಿಲಿಯನ್ ಡಾಲರ್ ಮೌಲ್ಯದ ಅಮೆರಿಕನ್ ವಸ್ತುಗಳನ್ನು ಖರೀದಿಸುವುದಾಗಿ ಹೇಳಿರುವುದು ನಮ್ಮ ಕೈಗಾರಿಕೆಗಳಿಗೆ ಹೊಡೆತವಾಗುವುದಿಲ್ಲವೇ? ಇದಕ್ಕೆ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಪಿಯೂಷ್ ಗೋಯಲ್ ಹಲವಾರು ಸುದ್ದಿಗೋಷ್ಠಿಗಳಲ್ಲಿ ರಾಹುಲ್ ಗಾಂಧಿಯನ್ನು “ವಿದೇಶಿ ಶಕ್ತಿಗಳ ಕೈಗೊಂಬೆ” ಎಂದು ಆರೋಪಿಸಿ, ವಿರೋಧಿ ಶಕ್ತಿಗಳೊಂದಿಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಕೈಜೋಡಿಸಿದೆ ಎಂಬ ಗಂಭೀರ ಆರೋಪಗಳನ್ನು ಮಾಡಿದ್ದರು.

RELATED ARTICLES
- Advertisment -
Google search engine

Most Popular