Saturday, February 28, 2026
Google search engine

Homeರಾಜ್ಯಇಂಧನ ಇಲಾಖೆ ಇರುವ ಸದಾವಕಾಶ ಬಳಸಿಕೊಂಡು ರೈತರ ಏಳಿಗೆಗೆ ಶ್ರಮಿಸುತ್ತಿದೆ : ಇಂಧನ ಸಚಿವ ಕೆ.ಜೆ.ಜಾರ್ಜ್

ಇಂಧನ ಇಲಾಖೆ ಇರುವ ಸದಾವಕಾಶ ಬಳಸಿಕೊಂಡು ರೈತರ ಏಳಿಗೆಗೆ ಶ್ರಮಿಸುತ್ತಿದೆ : ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್​​ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್​​ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ, 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ನೀಡಲು ಕ್ರಮ ವಹಿಸಲಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅದರೆ ಶೇ.80ರಷ್ಟು ಸಬ್ಸಿಡಿಯೊಂದಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದರು.

ರೈತರರಿಗೆ ವಿದ್ಯುತ್ ನೀಡುವ ಮೂಲಕ ಇಂಧನ ಇಲಾಖೆ ರಾಜ್ಯದ ಪ್ರಗತಿಗೆ ಮಹತ್ತರ ಕೊಡುಗೆ ನೀಡುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದು 1.65 ಕೋಟಿ ಕುಟುಂಬಗಳಿಗೆ ಬೆಳಕಾಗಿದೆ. ಇಂಧನ ಇಲಾಖೆ ಇರುವ ಸದಾವಕಾಶಗಳನ್ನು ಬಳಸಿಕೊಂಡು ನಾಡಿನ ಜನರ, ಮುಖ್ಯವಾಗಿ ರೈತರ ಏಳಿಗೆಗೆ ಶ್ರಮಿಸುತ್ತಿದೆ ಎಂದರು.

ಇನ್ನೂ ಸೌರಶಕ್ತಿಯನ್ನು ಕೃಷಿ ಚಟುವಟಿಕೆಗಳಿಗೆ ಸಂಯೋಜಿಸುವ ಮೂಲಕ ವಿದ್ಯುತ್ ಪರಿವರ್ತಕಗಳ ಮೇಲೆ ಬೀಳುತ್ತಿದ್ದ ಒತ್ತಡ ಹಾಗೂ ವಿದ್ಯುತ್ ಕಳ್ಳತನಗಳಿಗೆ ಕಡಿವಾಣ ಹಾಕಲಾಗುತ್ತಿದೆ ಅಲ್ಲದೆ ವಿದ್ಯುತ್ ಉತ್ಪಾದನೆಯಲ್ಲಿ ಪಗ್ರತಿ ಸಾಧಿಸಿದ್ದು, ವಿಶ್ವಾಸಾರ್ಹ ಪ್ರಸರಣವನ್ನು ಕಾಯ್ದುಕೊಂಡಿದ್ದೇವೆ ಎಂದು ಹೇಳಿದರು.

ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ನೀಡಿದೆ. ಸರ್ಕಾರ ಗ್ಯಾರಂಟಿಗಳಿಗೆ ಕಳೆದ ಸಾಲಿನಲ್ಲಿ 55,000 ಕೋಟಿ ರೂ. ಮೀಸಲಿಟ್ಟಿದೆ. ಇದರಲ್ಲಿ ಪ್ರತಿ ಕುಟುಂಬಕ್ಕೆ 5,000 ರೂ. ಸಿಗುತ್ತಿದೆ. ಪ್ರತಿಯಾಗಿ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ದುರದೃಷ್ಟವಶಾತ್ ನಾವು ಕಟ್ಟುವ ನಾಲ್ಕು ಲಕ್ಷ ಕೋಟಿ ರೂ. ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಕೇವಲ 60,000 ಕೋಟಿ ಹಣವನ್ನು ಮಾತ್ರ ರಾಜ್ಯಕ್ಕೆ ವಾಪಸ್ ನೀಡುತ್ತಿದೆ. ನಮ್ಮ ರಾಜ್ಯದ ಅಭಿವೃದ್ದಿಗೆ ಕೇಂದ್ರವೇ ಅಡ್ಡಗಾಲಾಗಿದೆ ಎಂದು ಸಚಿವರು ಆರೋಪಿಸಿದರು.

RELATED ARTICLES
- Advertisment -
Google search engine

Most Popular