2022 ರಲ್ಲಿ ಮುಲ್ಕಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕೋರ್ಟ್ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿ ಮಹತ್ವದ ಆದೇಶ ನೀಡಿದೆ. 19-03-2022 ರ ರಾತ್ರಿ ಸುಮಾರು 9-45ಕ್ಕೆ ಬಪ್ಪನಾಡು ಗ್ರಾಮದ ಮೂಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿ ಉಲ್ಲಂಜೆ ಎಂಬಲ್ಲಿಯ ಹರೀಶ್ ಸಾಲ್ಯಾನ್ (47) ಎಂಬಾತನನ್ನು ಹಣಕಾಸಿನ ದ್ವೇಷದಿಂದ ಆರೋಪಿ ಮುರುಗನ್ ಎಂಬಾತ ಹರೀಶ್ ಸಾಲ್ಯಾನ್ ನ ಮುಖಕ್ಕೆ ಸಿಮೆಂಟ್ ಕಾಂಕ್ರಿಟ್ ಸಹಿತ ಇರುವ ಕೆಂಪು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈ ಕುರಿತು ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಪಿಐ ಕುಸುಮಧರ್ ನಡೆಸಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಎ ಎಸ್ ಐ ಸಂಜೀವ್ ತನಿಖಾ ಸಮಯ ಸಹಕರಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾದ ಜಗದೀಶ್ ವಿ.ಎನ್. ಅವರು ಆರೋಪಿ ಮುರುಗನ್ ಎಂಬಾತನಿಗೆ ಕಲಂ 302 ಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರ PP ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು.



