Wednesday, June 18, 2025
Google search engine

Homeರಾಜ್ಯಸುದ್ದಿಜಾಲಏ. 22 ರಂದು ಶ್ರೀ ಅಪ್ರಮೇಯಸ್ವಾಮಿಯ ಬ್ರಹ್ಮ ರಥೋತ್ಸವ : ಬಿನೋಯ್

ಏ. 22 ರಂದು ಶ್ರೀ ಅಪ್ರಮೇಯಸ್ವಾಮಿಯ ಬ್ರಹ್ಮ ರಥೋತ್ಸವ : ಬಿನೋಯ್

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಮಳೂರು ಗ್ರಾಮದ ಶ್ರೀ ಅಪ್ರಮೇಯ ಸ್ವಾಮಿ ದೇವಸ್ಥಾನದ ೨೦೨೪ನೇ ಸಾಲಿನ ಬ್ರಹ್ಮರಥೋತ್ಸವವು ಏ. ೧೫ ರಿಂದ ಪ್ರಾರಂಭವಾಗಿ ಏ. ೨೫ ರವರೆಗೆ ನಡೆಯಲಿದೆ ಎಂದು ಉಪವಿಭಾಗಾಧಿಕಾರಿ ಬಿನೋಯ್ ಅವರು ತಿಳಿಸಿದರು.

ಅವರು ಇಂದು ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾತ್ರಾ ಸಂದರ್ಭದಲ್ಲಿ ವಿದ್ಯುತ್‌ನಲ್ಲಿ ಯಾವುದೇ ಆಡಚಣೆಯಾಗದಂತೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇತ್ತಿಚಿನ ದಿನದಲ್ಲಿ ಕಾಲರ ಸಮಸ್ಯೆ ಹೆಚ್ಚಾಗಿರುವುದರಿಂದ ಆಹಾರ ಮತ್ತು ಕುಡಿಯುವ ನೀರಿನ ಶುಚಿತ್ವದ ಬಗ್ಗೆ ಹೆಚ್ಚು ಗಮನಹರಿಸಬೇಕು. ಬ್ರಹ್ಮರಥೋತ್ಸವ ಸಂದರ್ಭದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು. ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದರು.

ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular