Thursday, June 5, 2025
Google search engine

Homeಅಪರಾಧಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ಬೆಂಗಳೂರು: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ.

ಇತ್ತ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular