ರಾಮನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿ ಇಂದು (ಮಾ. ೩೦ ರಂದು) ೫ ನಾಮಪತ್ರ ಸ್ವೀಕರಿಸಲಾಗಿದೆ.
೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಇಂದು ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಹೇಮಾವತಿ ಕೆ., ಬಹುಜನ್ ಸಮಾಜ ಪಕ್ಷದ ಅಭ್ಯರ್ಥಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ, ಸ್ವತಂತ್ರ ಪಕ್ಷದ ಇಬ್ಬರು ಅಭ್ಯರ್ಥಿಗಳಾದ ದೇವರಾಜು ಎಂ.ಸಿ. ಮತ್ತು ಶ್ರೀನಿವಾಸ ಮೂರ್ತಿ ಹೆಚ್.ಕೆ. ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಮಹಮದ್ ಮುಸದಿಕ್ ಪಾಷ ಅವರು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.