Saturday, June 14, 2025
Google search engine

Homeಅಪರಾಧಬೈಕ್‌ ಗಳ ನಡುವೆ ಅಪಘಾತ: ಓರ್ವ ಸಾವು

ಬೈಕ್‌ ಗಳ ನಡುವೆ ಅಪಘಾತ: ಓರ್ವ ಸಾವು

ಸುರತ್ಕಲ್‌: ಬೈಕ್‌ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ – ಎಂಆರ್ ಪಿಎಲ್‌ ರಸ್ತೆಯ ಕಾನ ಕಟ್ಲ ಸೀತಾ ಕಾಂಪೌಂಡ್ ಬಳಿಯ ಮಿಲ್ಕ್ ಪಾರ್ಲರ್ ಬಳಿ ರವಿವಾರ ಬೆಳಗ್ಗಿನ ಜಾವ 2 ಗಂಟೆಯ ಸುಮಾರಿಗೆ ನಡೆದಿದೆ.

ಅಪಘಾತದಲ್ಲಿ ಕಾನ ಗಣೇಶ್ ಬೀಡಿ ಬಳಿಯ ನಿವಾಸಿ ಯಶೋಧರ (23) ಎಂಬವರು ಮೃತಪಟ್ಟಿದ್ದು, ಅವರೊಂದಿಗೆ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದ ಕಾನ ಕಟ್ಟೆ ಬಳಿಯ ನಿವಾಸಿ ಕಿಶೋರ್ (18) ಹಾಗೂ ಇನ್ನೊಂದು ವಾಹನದಲ್ಲಿ ಸಂಚರಿಸುತ್ತಿದ್ದ ಮೂಲತಃ ಕೇರಳ ನಿವಾಸಿಗಳು ಹಾಗೂ ಮುಕ್ಕ ಕಾಲೇಜೊಂದರ ವಿದ್ಯಾರ್ಥಿಗಳಾದ ಅಮನ್(21), ಮುಹಮ್ಮದ್ ಆದಿಲ್ ( 21), ಮುಹಮ್ಮದ್ ತಫಾದ್ (21) ಎಂಬವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಲೈಟಿಂಗ್ ಕೆಲಸ ಮುಗಿಸಿ ಬರುತ್ತಿದ್ದ ಯಶೋಧರ, ಕಿಶೋರ್ ಗೆ ಒಂದೇ ಬೈಕಿನಲ್ಲಿ ಮೂವರು ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ.

RELATED ARTICLES
- Advertisment -
Google search engine

Most Popular