12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಕಾರ್ಕಳ ಎಂಬಲ್ಲಿ ನಡೆದಿದೆ.ತಾಜ್ ಮೊಹಮ್ಮದ್ ಯುಸೂಫ್, ಬಂಧಿತ ವ್ಯಕ್ತಿ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ಮೂಲದ ಈ ವ್ಯಕ್ತಿಯನ್ನು ಬಂಟ್ವಾಳ
ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾರ ನಿರ್ದೇಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ ಮತ್ತು ಕೃಷ್ಣಕಾಂತ ಕೆ ರವರುಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪಿಸಿ 2462 ಶಿವಾನಂದ ಮಡ್ಡಿ .ಪಿ ಸಿ 2467 ಶಿದ್ದಪ್ಪ .ಪಿಸಿ 2474 ಪ್ರವೀಣ್ ರವರುಗಳ ತಂಡ, ಉಡುಪಿ ಕಾರ್ಕಳ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



