Sunday, June 8, 2025
Google search engine

Homeರಾಜ್ಯಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯಕರ್ತರು ತಳಮಟ್ಟದಿಂದ ಕೆಲಸ ಮಾಡಿ:...

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯಕರ್ತರು ತಳಮಟ್ಟದಿಂದ ಕೆಲಸ ಮಾಡಿ: ನಿಖಿಲ್ ಕುಮಾರ್ ಸ್ವಾಮಿ

ಮದ್ದೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು 2 ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಳಮಟ್ಟದಿಂದ ಕೆಲಸ ಮಾಡಬೇಕಾಗಿದೆ ಎಂದು ಜೆಡಿಎಸ್ ಪಕ್ಷದ ಯುವ ಮುಖಂಡ ನಿಖಿಲ್ ಕುಮಾರ್ ಸ್ವಾಮಿ ತಿಳಿಸಿದರು.

ಪಟ್ಟಣದ ಹೊರವಲಯದ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬುಧವಾರ  ನಡೆದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಸಮನ್ವಯ ಸಭೆಯ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರದಾನಮಂತ್ರಿ ಮೋದಿ ಅವರು 10 ವರ್ಷಗಳು ಪ್ರಧಾನಿ ಕೆಲಸ ಮಾಡುವ ಮೂಲಕ ದೇಶದ ಅಭಿವೃದ್ದಿಗೆ ಯೋಧನ ರೀತಿಯ ಕೆಲಸ ಮಾಡುತ್ತಿದ್ದು, ಅವರು 3 ನೇ ಅವಧಿಗೆ ಪ್ರಧಾನಿಯಾಗಲು ಎನ್.ಡಿ.ಎ.ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲ ಪಡಿಸಬೇಕು ಎಂದರು.

62 ವರ್ಷಗಳ ಸುದೀರ್ಘ ಸಮಯದಿಂದ ಪಕ್ಷವನ್ನು ಕಟ್ಟಲಾಗಿದೆ. ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಪಕ್ಷದ ಜೊತೆ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮ ಪಡಬೇಕು ಎಂದು ಮನವಿ ಮಾಡಿದರು.

ಇಂದು ಇಬ್ಬರು ಹೃದಯವಂತರು ಸ್ಪರ್ಧೆ ಮಾಡುತ್ತಿದ್ದಾರೆ. ಸಾವಿರಾರು ಜೀವಗಳನ್ನು ಉಳಿಸಿದ ಡಾ.ಮಂಜುನಾಥ್ ಸ್ಪರ್ಧೆ ಮಾಡ್ತಿದ್ದಾರೆ. ಮಂಡ್ಯದ ಸಾವಿರಾರು ಹೃದಯಗಳಲ್ಲಿರುವ ಕುಮಾರಣ್ಣ ಸ್ಪರ್ಧೆ ಮಾಡ್ತಿದ್ದಾರೆ ಇಬ್ಬರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಕುಮಾರಸ್ವಾಮಿ ಅವರನ್ನು ದೆಹಲಿಗೆ ಕಳುಹಿಸಲು ನೀವೆಲ್ಲ ಶ್ರಮ ಪಡಬೇಕಿದೆ. ಸಂಸದರಾಗಿ ಕುಮಾರಸ್ವಾಮಿ ಅವರು ಆಯ್ಕೆಯಾದರೆ ಕಾವೇರಿ ನದಿ ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಸಮಸ್ಯೆಗಳನ್ನು ಕುಮಾರಸ್ವಾಮಿ ಬಗೆಹರಿಸಲಿದ್ದಾರೆಂದರು.

ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2019 ರ ಸೋಲು ಕಾರ್ಯಕರ್ತರ ಸೋಲಾಗಿದೆ. ಜಿಲ್ಲೆಯಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕುಮಾರಸ್ವಾಮಿ ಅವರ ಸರ್ಕಾರ ಇರಲಿಲ್ಲ. 6ಕೋಟಿ ಕನ್ನಡಿಗರ ಆಶೀರ್ವಾದ ಇದ್ದರೆ ರೈತರ ಸಾಲ ಮನ್ನಾ ಮಾಡ್ತಿವಿ ಅಂತ ಹೇಳಿದ್ರು. ಆದರೆ ನಮಗೆ 36 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವು ಎಂದರು.

ನಾವು ಯಾರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಆದರೆ ದೆಹಲಿ ದೊರೆಗಳು ನನ್ನ ಮನೆಯ ಬಳಿ ಬಂದು ಬಿಜೆಪಿ ನಾಯಕರ ಜೊತೆ ಕೈ ಜೋಡಿಸಬೇಡಿ ಎಂದು ಕಾಂಗ್ರೆಸ್ ಪಕ್ಷದವರು ಮುಖ್ಯಮಂತ್ರಿ ಮಾಡಿದರು.

ರಾಜ್ಯದ ಆರ್ಥಿಕ ಪರಿಸ್ಥಿಯನ್ನು ಅರ್ಥ ಮಾಡಿಕೊಂಡು ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಜೊತೆ ಮೈತ್ರಿಯಾಗಿತ್ತು. 90 ವರ್ಷದ ಹಿರಿಯ ಜೀವಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಸ್ಪರ್ಧೆ ಮಾಡಿಸಿ ಬೆನ್ನಿಗೆ ಚೂರಿ ಹಾಕಿದವರು ಕಾಂಗ್ರೆಸ್ನವರು ಎಂದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ,  ಕೆ.ಆರ್.ಎಸ್.ನಲ್ಲಿ 96 ಅಡಿ ನೀರಿದ್ದರು ನಾಲೆಗಳ ಮೂಲಕ ನೀರು ಹರಿಸದ ಪರಿಣಾಮ ಇದು ಕೋಟ್ಯಂತರ ರೂ.ಬೆಲೆ ಬಾಳುವ ಬೆಳೆಗಳು ಒಣಗುತ್ತಿದೆ. ಈ ಬಗ್ಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಸರ್ಕಾರಕ್ಕೆ ಯವುದೇ ರೀತಿಯ ಕಾಳಜಿಯಿಲ್ಲ. ಇಂತವರಿಗೆ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ  ನನ್ನ ಸೋಲಿಸೋಕೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. 2019 ರ ಕಹಿ ಘಟನೆ ಮರುಕಳಿಸಬಾರದು. ಜಿಲ್ಲೆಯಲ್ಲಿ ಮೈತ್ರಿ ಧರ್ಮ ಪಾಲನೆಯಾಗಬೇಕು ಎಂದರು.

ಖರ್ಗೆ ಅವರು ಸಿಎಂ ಆಗ್ಬೇಕು ಅಂತ ದೇವೆಗೌಡರು ಬೆಂಬಲ ಕೊಟ್ಟಿದ್ದರು. ಪ್ರಥಮ ಬಾರಿಗೆ ಬಿಜೆಪಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ್ರು.

20 ತಿಂಗಳ ಆಡಳಿತದಲ್ಲಿ ಜನತಾ ದರ್ಶನ ಎಂಬ ಬೃಹತ್ ಕಾರ್ಯಕ್ರಮ ಜನಮಾನಸದಲ್ಲಿ ಉಳಿದಿದೆ. ಗ್ರಾಮ ವಾಸ್ತವ್ಯ ಎಂಬ ಜನಪರವಾದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನರ ಮನಸಿನಲ್ಲಿ ಅಚ್ಚ ಹಸಿರಾಗಿ ಉಳಿದಿದೆ ಎಂದರು.

ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿ ಮಾಡಲು ಜೆಡಿಎಸ್ನಿಂದ ಯಾರು ಗಂಡಸರು ಇಲ್ವಾ ಎಂದು ಇತ್ತೀಚೆಗೆ ಶಾಸಕ ಕದಲೂರು ಉದಯ್ ಹೇಳಿಕೆ ವಿಚಾರವಾಗಿ ಸಭೆಯಲ್ಲಿ ಮಾತನಾಡಿದ ನಿಖಿಲ್ಕುಮಾರ್ಸ್ವಾಮಿ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧೆ ಮಾಡಿಲ್ವ. ರಾಹುಲ್ ಗಾಂಧಿ ಕೇರಳದಲ್ಲಿ ಸ್ಪರ್ಧೆ ಮಾಡಿಲ್ವ. ಸಿಎಂ ಸಿದ್ದರಾಮಯ್ಯ ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿಲ್ವ. ಕುಮಾರಸ್ವಾಮಿ ಮಂಡ್ಯ ಗೆ ಬಂದ್ರೆ ಏನು ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್ ಮಲ್ ನಿರ್ದೇಶಕರಾದ ಎಸ್.ಪಿ.ಸ್ವಾಮಿ, ರೂಪ, ಚುನಾವಣಾ ಉಸ್ತುವಾರಿ ಸುನೀಲ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಗುರುಚರಣ್, ಬಿಜೆಪಿ ಮುಖಂಡ ಮುನಿರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮುಖಂಡರಾದ ಸಿ.ಪಿ.ಉಮೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಬಿಜೆಪಿ ತಾ ಅಧ್ಯಕ್ಷ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವ್ ಮುಖಂಡರಾದ ದೇವರಹಳ್ಳಿ ವೆಂಕಟೇಶ್ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular