ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜೂನ್ 27ರಿಂದ ಆಷಾಢ ಮಾಸದ ಶುಕ್ರವಾರದ ಪೂಜೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಭಕ್ತರಿಗೆ ಸರಕಾರದ ಬಸ್ಗಳ ಮೂಲಕ ಉಚಿತ ಸೇವೆ ವ್ಯವಸ್ಥೆ ಒದಗಿಸಲಾಗುತ್ತದೆ. ಭಕ್ತರ ಸೌಲಭ್ಯಕ್ಕಾಗಿ ₹300ರ ವಿಶೇಷ ಕ್ಯೂ ಸಿಸ್ಟಮ್ ಟಿಕೆಟ್ ಮತ್ತು ₹2000ರ ಎಸಿ ಬಸ್ ದರ್ಶನ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಇಲಾಖೆವಾರು ಪ್ರಗತಿ ಪರಿಶೀಲನೆ ಸಭೆಯ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಟಿ. ದೇವೇಗೌಡ, ಡಿಸಿ ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಎಸ್ಪಿ ವಿಷ್ಣುವರ್ಧನ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.