ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧದ ಚಿನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಜೂನ್ 19 ರಂದು ಬೆಳಿಗ್ಗೆ 11ಕ್ಕೆ ಬರುವಂತೆ ಸೂಚಿಸಲಾಗಿದೆ. ಆದರೆ ಡಿ.ಕೆ. ಸುರೇಶ್ ಅವರು ಜೂನ್ 23ರಂದು ಹಾಜರಾಗುವುದಾಗಿ ತಿಳಿಸಿದ್ದಾಗಿ ವರದಿಯಾಗಿದೆ. ಅವರ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾ ಗೌಡ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ವಂಚಿಸಿದ್ದ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಈಗಾಗಲೇ ಐಶ್ವರ್ಯಾಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.