ಬೆಂಗಳೂರು: ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ಅವರು ದಿವಂಗತ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ. ಮೈಸೂರು ಜಿಲ್ಲೆಯ ಕೆಆರ್ ನಗರ ಮೂಲದ ಅವರು, ಬಾಲ್ಯದಲ್ಲೇ ಕಾಂಗ್ರೆಸ್ ಮಹಿಳಾ ಘಟಕದಲ್ಲಿ ಸಕ್ರಿಯರಾಗಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿ ಸೇವೆ ಸಲ್ಲಿಸಿದ ಐಶ್ವರ್ಯಾ, ಪಕ್ಷದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.