Sunday, June 22, 2025
Google search engine

Homeರಾಜಕೀಯಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ  ಕೈವಾಡ ಆರೋಪ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಪ್ರತಿಕೃತಿ ದಹಿಸಿ...

ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ  ಕೈವಾಡ ಆರೋಪ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ ಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿ ಮಳವಳ್ಳಿ ಪಟ್ಣಣದಲ್ಲಿ ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣದ ಅನಂತರಾಮ್ ವೃತ್ತದ ಬಳಿ ಮಾನವ ಸರಪಳಿ ರಚಿಸಿ ಹೆದ್ದಾರಿ ತಡೆ ನಡೆಸಿರುವ ಪ್ರತಿಭಟನಾಕಾರರು, ಪ್ರಕರಣದಲ್ಲಿ ಎಚ್ ಡಿಡಿ ಕುಟುಂಬಕ್ಕೆ ಮಸಿ ಬಳಿಯಲು ಹೊರಟ ಡಿಕೆಶಿ ನಡೆಗೆ ಆಕ್ರೋಶ ಹೊರಹಾಕಿದ್ದಾರೆ.

ಪ್ರಕರಣದ ರುವಾರಿಯಾದ ಡಿಸಿಎಂ‌ ಡಿಕೆಶಿ ಹಾಗೂ ಮಾಜಿ ಸಂಸದ ಶಿವರಾಮೇಗೌಡ ವಿರುದ್ದ ಧಿಕ್ಕಾರ ಕೂಗಿ ಅಸಮಧಾನ ವ್ಯಕ್ತಪಡಿಸಿದ್ದು, ಅಲ್ಲದೇ ವೃತ್ತದಲ್ಲಿ ಇಬ್ಬರ ಪ್ರತಿಕೃತಿ ದಹಿಸಿದ್ದಾರೆ.

ಈ ಪ್ರಕರಣವನ್ನು ಎಸ್ಐಟಿ ಯಿಂದ ಸಿಬಿಐಗೆ ವರ್ಗಾಯಿಸಲು ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular