Monday, June 2, 2025
Google search engine

Homeರಾಜ್ಯಸುದ್ದಿಜಾಲಆನೆಗೊಂದಿ ಉತ್ಸವ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಆನೆಗೊಂದಿ ಉತ್ಸವ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಕೊಪ್ಪಳ: ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ನಡೆದ ಹ್ಯಾಂಡ್ ಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಇತರೆ ಕ್ರೀಡೆಗಳಲ್ಲಿ ವಿಜೇತರಾದ ತಂಡಗಳಿಗೆ ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಬಹುಮಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಗಂಗಾವತಿ ತಹಶೀಲ್ದಾರರಾದ ಯು.ನಾಗರಾಜ, ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹದೇವಿ, ಉಪಾಧ್ಯಕ್ಷರಾದ ಪೂರ್ಣಿಮಾ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಗಂಗಾವತಿ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಗಂಗಾವತಿ ಮತ್ತೊಂದು ತಂಡ ವಿದ್ಯಾನಗರದ ತಂಡವು ದ್ವಿತೀಯ ಸ್ಥಾನ ಪಡೆದರೆ, ಕಲಬುರಗಿಯ ತಂಡವು ತೃತಿಯ ಸ್ಥಾನವನ್ನು ಪಡೆದಿದೆ.
ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಗಂಗಾವತಿಯ ಸಿಬಿಎಸ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಕೊಪ್ಪಳದ ತಂಡ ದ್ವಿತೀಯ ಸ್ಥಾನ ಪಡೆದರೆ, ಬಳ್ಳಾರಿಯ ತಂಡವು ತೃತಿಯ ಸ್ಥಾನವನ್ನು ಪಡೆದಿದೆ ಎಂದು ಆನೆಗೊಂದಿ ಉತ್ಸವದ ಕ್ರೀಡಾ ಸಮಿತಿ ಪ್ರಕಟಣೆ ತಿಳಿಸಿದೆ

RELATED ARTICLES
- Advertisment -
Google search engine

Most Popular