ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಹುಣಸೂರಿನ ಬಿಳಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ , ಜನರಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡುವ ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೇಮಿಸುವಂತೆ ಕೋರಿ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಡಾ.ಹೆಚ್ ಸಿ ಮಹದೇವಪ್ಪ ವರಿಗೆ ಜನಧ್ವನಿ ಪೌಂಡೇಶನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಪೌಂಡೇಶನ ಅಧ್ಯಕ್ಷ ವಕೀಲ ಆಯಿರಹಳ್ಳಿ ಪ್ರವೀಣ್ ನೇತೃತ್ವದಲ್ಲಿ ಸಚಿವರನ್ನು ಬೇಟಿ ಈ ಆಸ್ಪತ್ರೆಯ ಮೇಲ್ದರ್ಜೆಗೆ ಏರಿಸಿದರೇ ಬಿಳಿಕೆರೆ ಹೋಬಳಿಯ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು.
ಮನವಿ ಸ್ವೀಕರಿಸಿದ ಸಚಿವರು ಈ ಸಂಬಂಧ ಆರೋಗ್ಯ ಸಚಿವರ ಗಮನಕ್ಕೆ ತಂದು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ತಾಲ್ಲೋಕು ಪಂಚಾಯಿತಿ ಉಪಾಧ್ಯಕ್ಷರಾದ ಮಹದೇವಣ್ಣ, ಬಿಳಿಕೆರೆ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.