Monday, June 9, 2025
Google search engine

Homeರಾಜ್ಯವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಾಧನೆ ಮಾಡಿ: ಬಿ ವಿ ಮಂಜುನಾಥ್

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಾಧನೆ ಮಾಡಿ: ಬಿ ವಿ ಮಂಜುನಾಥ್

ವರದಿ:  ಚಪ್ಪರದಹಳ್ಳಿ ವಿನಯ್ ಕುಮಾರ್

ಬೆಟ್ಟದಪುರ:  ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದು ಎಸ್ಎಂಎಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ ವಿ ಮಂಜುನಾಥ್  ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ  ಶ್ರೀ ಸಿಡ್ಲು ಮಲ್ಲಿಕಾರ್ಜುನ ವಿದ್ಯಾ ಸಂಸ್ಥೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ವಿದ್ಯಾ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ. ಮಕ್ಕಳು ಶ್ರದ್ಧೆಯಿಂದ ಕಲಿತರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ, ಆದ್ದರಿಂದ ಮಕ್ಕಳು ತನ್ನ ಭವಿಷ್ಯದ ಚಿಂತನೆಯನ್ನು ಮಾಡಬೇಕು ಎಂದರು.

 ಮುಖ್ಯ ಶಿಕ್ಷಕ ಎಸ್ ಆರ್ ವೆಂಕಟೇಶ್ ಮಾತನಾಡಿ,  ಎಸ್ಎಮ್ಎಸ್ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮಿ ಮರು ಮೌಲ್ಯಮಾಪನದಲ್ಲಿ ಒಂದು ಅಂಕವನ್ನು ಹೆಚ್ಚಿಗೆ ಪಡೆಯುವ ಮೂಲಕ ಪಿರಿಯಾಪಟ್ಟಣ ತಾಲೂಕಿಗೆ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಸಾರಿಕಾ ಎಂಬ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 25 ಅಂಕಗಳನ್ನು ಹೆಚ್ಚಿಗೆ ಪಡೆದಿದ್ದಾರೆ. ಆದರಿಂದ ಶ್ರಮವಹಿಸಿ ಕಲಿತರೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದರು.

 ಈ ಸಂದರ್ಭದಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಶಾಲೆಯ ಪರವಾಗಿ ಉತ್ತಮ ಫಲಿತಾಂಶವನ್ನು ಪಡೆದಿರುವ ಲಕ್ಷ್ಮಿಮತ್ತು ಲಿಕೃತಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.

 ಈ ಸಂದರ್ಭದಲ್ಲಿ ಎಸ್ಎಂಎಸ್ ವಿದ್ಯಾಸಂಸ್ಥೆಯ  ಕಾರ್ಯದರ್ಶಿ ಎ ವಿ ಛಾಯ, ಪ್ರಾಂಶುಪಾಲ ರಾಜು, ಮುಖ್ಯ ಶಿಕ್ಷಕ ಡಿ ಎನ್ ಸ್ವಾಮಿ,ಪೋಷಕರಾದ ರಾಮೇಗೌಡ, ವೆಂಕಟೇಶ್, ಚಂದ್ರಕಾಂತ್, ಶಿಕ್ಷಕರಾದ ಕುಮಾರ್, ಅoದಾನಯ್ಯ, ಸುನಿಲ್, ಅಭಿಲಾಶ್, ಶಿವಕುಮಾರ್, ಅನಿಲ್ ಕುಮಾರ್ ಸತೀಶ್, ಸೋಮಶೇಖರ್, ರೂಪ,ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular