Tuesday, December 9, 2025
Google search engine

Homeರಾಜ್ಯಸುದ್ದಿಜಾಲದೀಪಾವಳಿ ಜಾತ್ರೆ ಹಿನ್ನೆಲೆ : ಮಲೆ ಮಹದೇಶ್ವರಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿಷೇಧ

ದೀಪಾವಳಿ ಜಾತ್ರೆ ಹಿನ್ನೆಲೆ : ಮಲೆ ಮಹದೇಶ್ವರಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿಷೇಧ

 ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ ದೀಪಾವಳಿ ಜಾತ್ರಾ ಸಂಬoಧ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ತೆರಳುವ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರವನ್ನು ಅಕ್ಟೋಬರ್  ೧೯ರ ಬೆಳಗ್ಗೆ ೬ ರಿಂದ ೨೨ರ ಸಂಜೆ ೭ ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ. 

ದೀಪಾವಳಿ ಜಾತ್ರಾ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವುದರಿಂದ ಹಾಗೂ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು, ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ಅನ್ವಯ ಮಲೆಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಸಾರ್ವಜನಿಕರು, ಭಕ್ತಾಧಿಗಳು ದ್ವಿಚಕ್ರ ಮತ್ತು ತ್ರಿಚಕ್ರ (ಆಟೋರಿಕ್ಷಾ ಮತ್ತು ಗೂಡ್ಸ್ ವಾಹನಗಳು ಸೇರಿದಂತೆ) ವಾಹನಗಳಲ್ಲಿ ತೆರಳುವುದನ್ನು ಅಕ್ಟೋಬರ್ ೧೯ರ ಬೆಳಗ್ಗೆ ೬ ರಿಂದ ೨೨ರ ಸಂಜೆ ೭ ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೊಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. 

RELATED ARTICLES
- Advertisment -
Google search engine

Most Popular