Friday, June 13, 2025
Google search engine

Homeಅಪರಾಧಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ: ಖದೀಮರು ಪರಾರಿ

ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ: ಖದೀಮರು ಪರಾರಿ

ಮಂಗಳೂರು: ನಾಲ್ಕು ಗೋವುಗಳನ್ನು ಹಿಂಸಾತ್ಮಕವಾಗಿ ಸ್ವಿಫ್ಟ್ ಕಾರಿನಲ್ಲಿ ತುಂಬಿ ಕೊಂಡು ಅಕ್ರಮವಾಗಿ ಸಾಗಾಟ ಮಾಡುವಾಗ ಬಜರಂಗದಳ ಕಾರ್ಯಕರ್ತರು ತಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ದಂಧೆಕೋರರನ್ನು ತಡೆದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವುಗಳ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಕ್ಷಣೆ ಮಾಡಿದ ಗೋವುಗಳಿಗೆ ಬಜರಂಗದಳ ಕಾರ್ಯಕರ್ತರು ನೀರು ಮೇವಿನ ವ್ಯವಸ್ಥೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular