Monday, June 9, 2025
Google search engine

Homeಅಪರಾಧಬೆಂಗಳೂರು: ನಕಲಿ ಕೀ ಬಳಸಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳರ ಬಂಧನ

ಬೆಂಗಳೂರು: ನಕಲಿ ಕೀ ಬಳಸಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳರ ಬಂಧನ

ಬೆಂಗಳೂರು: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಕಳ್ಳರನ್ನು ಕೆ.ಜಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳು.

ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್ಲೇ ಆರೋಪಿಗಳು ಕಳೆದ 15 ವರ್ಷಗಳಿಂದ ವಾಸವಾಗಿದ್ದಾರೆ. ಆರೋಪಿಗಳು ಮಾರ್ಚ್ 29 ರಂದು ನಕಲಿ ಕೀಲಿಕೈ ಬಳಸಿ ಉಮಾ ಅವರ ಮನೆಯಲ್ಲಿದ್ದ 6 ಲಕ್ಷ ಹಣ ಮತ್ತು 3.22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು, ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಣ ಹಾಕಿದ್ದರು.

ಕೆ.ಜಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular