Friday, June 20, 2025
Google search engine

Homeಸ್ಥಳೀಯಯುವ ಮತದಾರರ ಗಮನ ಸೆಳೆಯಲು ಬೈಕ್ ರ್‍ಯಾಲಿ: ಡಾ ಕೆ ವಿ ರಾಜೇಂದ್ರ

ಯುವ ಮತದಾರರ ಗಮನ ಸೆಳೆಯಲು ಬೈಕ್ ರ್‍ಯಾಲಿ: ಡಾ ಕೆ ವಿ ರಾಜೇಂದ್ರ

ಮೈಸೂರು: ಲೋಕಸಭಾ ಚುನಾವಣೆಯು ಹತ್ತಿರ ಬರುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್  ರ್ಯಾಲಿಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ .ವಿ ರಾಜೇಂದ್ರ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ ವತಿಯಿಂದ ಗನ್ ಹೌಸ್ ಸರ್ಕಲ್ ನಿಂದ ಕೆಂಪೇಗೌಡ ಸರ್ಕಲ್ ವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿ ಕಾರ್ಯಕ್ರಮದ ಭಾಗವಹಿಸಿ  ಮಾತನಾಡಿದರು.

 ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು ಎಂದರು.

ಪ್ರಸ್ತುತ ಯುವಜನರು ಮತದಾನ ಎಂದರೆ ಹಿಂಜರಿಯುವುದುಂಟು. ಹಾಗಾಗಿ ಅವರಿಗೆ ಮತದಾನದ ಮಹತ್ವವನ್ನು ತಿಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಚುನಾವಣೆಯನ್ನು ಯಶಸ್ವಿ ಮಾಡಿಬೇಕು ಎಂದರು.

ಚುನಾವಣಾ ಅಕ್ರಮಗಳನ್ನು ತಡೆಯುವುದು ಕೇವಲ ಅಧಿಕಾರಿಗಳಿಗೆ ಸೀಮಿತವಾಗಿಲ್ಲ. ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯು ನಮ್ಮೊಂದಿಗೆ ಕೈಜೋಡಿಸಿ ಚುನಾವಣಾ ಅಕ್ರಮಗಳು ಕಂಡುಬಂದರೆ ಸಿ ವಿಜಿಲ್ ಆಪ್ ನಲ್ಲಿ ವಿಡಿಯೋ, ಆಡಿಯೋ, ಫೋಟೋ ಹಾಗೂ ಜಿ.ಪಿ.ಎಸ್ ಮೂಲಕ ಮಾಹಿತಿಯನ್ನು ನೀಡಿ ಅಕ್ರಮವನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಆಯುಕ್ತರಾದ ರಮೇಶ್ ಬನೋತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ.ಎಂ ಗಾಯಿತ್ರಿ, , ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆಯ ಆಯುಕ್ತರಾದ ಎನ್. ಎನ್ ಮಧು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular