Thursday, May 29, 2025
Google search engine

Homeಅಪರಾಧಪಟಾಕಿ ಇಳಿಸುವಾಗ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

ಪಟಾಕಿ ಇಳಿಸುವಾಗ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

ಕೇರಳ: ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್ ​ನಲ್ಲಿರುವ ಮನೆಯೊಂದರ ಪಟಾಕಿ ಸಂಗ್ರಹಗಾರದ ಬಳಿ ನಡೆದಿದೆ.

ಸುಮಾರು 16 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಸಮೀಪದ ಮನೆಗಳು ಹಾಗೂ ಇತರೆ ಕಟ್ಟಡಗಳಿಗೆ ಹಾನಿಯುಂಟಾಗಿದೆ.

ಮೃತರನ್ನು ಉಳೂರು ಮೂಲದ ಅಶೋಕನ್ ಅವರ ಪುತ್ರ ವಿಷ್ಣು ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಕೂಡಲೇ ಅವರನ್ನು ಸಮೀಪದ ತ್ರಿಪುಣಿತುರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ ಆಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ಫೋಟದಲ್ಲಿ ಗಾಯಗೊಂಡ 12 ಮಂದಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ. ಇವರಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಓರ್ವನನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಕಲಮೆಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ನಡುವೆ ಪೊಲೀಸರ ಅನುಮತಿ ಪಡೆಯದೇ ಪಟಾಕಿಗಳನ್ನು ಜನವಸತಿ ಪ್ರದೇಶಕ್ಕೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ.

ಪಟಾಕಿ ಕೊಂಡೊಯ್ಯುವ ವಾಹನವೂ ಬೆಂಕಿಗಾಹುತಿಯಾಗಿದೆ. ಅಕ್ಕಪಕ್ಕದಲ್ಲಿದ್ದ ವೃದ್ಧರು, ಮಕ್ಕಳು ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಫೋಟದಲ್ಲಿ 30 ಮನೆಗಳಿಗೆ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular