ಮುಂಬೈ: ಪುಣೆಯ ತಲೆಗಾಂವ ಪ್ರದೇಶದ ಕುಂಡ್ಮಾಲ್ ಬಳಿ ಇಂದ್ರಯಾಣಿ ನದಿಗೆ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಇಂದು ಭಾರೀ ಮಳೆಯಿಂದ ಉಂಟಾದ ಪ್ರವಾಹದ ಹೊತ್ತಿಗೆ ಕುಸಿದಿದೆ. ಈ ದುರಂತದಲ್ಲಿ 20ರಿಂದ 25 ಮಂದಿ ನದಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಆತಂಕದ ವರದಿಗಳು ಬಂದಿವೆ.
ಕಳೆದ ಕೆಲವು ತಿಂಗಳಿಂದ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಆದರೂ ಜನರು ಸೇತುವೆಯ ಮೇಲೆ ನದಿ ವೀಕ್ಷಣೆಗಾಗಿ ನಿಂತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ನಂತರ ಜಿಲ್ಲಾಡಳಿತ ಹಾಗೂ ಸ್ಥಳೀಯ ಪೊಲೀಸರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ. ನದಿಯ ಬಳಿ ಸಾರ್ವಜನಿಕರು ಸುಳಿಯದಂತೆ ಮುನ್ನೆಚ್ಚರಿಕೆ ಸೂಚನೆ ನೀಡಲಾಗಿದೆ. ಮೃತರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಈ ಘಟನೆಗೆ ಸಾರ್ವಜನಿಕರಲ್ಲಿ ಆತಂಕ ಮೆರೆಯುತ್ತಿದೆ.