Thursday, June 26, 2025
Google search engine

Homeರಾಜ್ಯಸುದ್ದಿಜಾಲನಾಳೆ ಮಡಿಕೇರಿಯಲ್ಲಿ ಕಾರ್ ರ್‍ಯಾಲಿ

ನಾಳೆ ಮಡಿಕೇರಿಯಲ್ಲಿ ಕಾರ್ ರ್‍ಯಾಲಿ

ಮಡಿಕೇರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ಪೂರ್ಣಗೊಂಡಿದೆ. ಹಲವು ಯುವಕರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ಇಂದು ಶನಿವಾರ ರಂಗೋಲಿ ಸ್ಪರ್ಧೆ ನಡೆಯಿತು. ೧೮ ವರ್ಷ ಪೂರೈಸಿದ ಎಲ್ಲರೂ ಇದೇ ಏಪ್ರಿಲ್ ೨೬ ರಂದು ಮತದಾನದ ಹಕ್ಕನ್ನು ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮನೆಯಿಂದ ಮತಗಟ್ಟೆಗೆ ಬಂದು, ಹಕ್ಕು ಚಲಾಯಿಸಿ, ತಪ್ಪದೇ ಮತದಾನ ಮಾಡಿ ಎಂಬ ಘೋಷಣೆಗಳು ರಂಗೋಲಿ ಸ್ಪರ್ಧೆಯಲ್ಲಿ ಕಂಡು ಬಂದವು. ಮಾ.೩೧ರಂದು ಕಾರ ?ಯಕ್ರಮ: ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟೇರಿಯನ್ ಕೆ.ವಿಶ್ವನಾಥ ಶೆಣೈ ಅವರ ಸಂಯುಕ್ತಾಶ್ರಯದಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಅಭಿಯಾನಕ್ಕೆ ಮಾ.೩೧ರಂದು ಬೆಳಗ್ಗೆ ೭ಕ್ಕೆ ನಗರದ ರಾಜಾಸೀಟು ಎದುರು ಕಾರ ?ಯಕ್ರಮ ಹಾಗೂ ಬೀದಿ ನಾಟಕದ ಮೂಲಕ ಚಾಲನೆ ನೀಡಲಾಗುವುದು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜ, ಜಿ.ಪಂ. ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ವರ್ಣಿತ್ ನೇಗಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ್ ತಿಳಿಸಿದ್ದಾರೆ .

RELATED ARTICLES
- Advertisment -
Google search engine

Most Popular