ಮಂಗಳೂರು (ದಕ್ಷಿಣ ಕನ್ನಡ): ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಸಮೀಪದ ಪಾವಂಜೆ ದೇವಸ್ಥಾನದ ಬಳಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಇನ್ನೋವಾ ಕಾರು ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಅಪಘಾತದಿಂದ ಸ್ಕೂಟಿ ಸವಾರ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಕಾರು ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ರು.