ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು, ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾಂಡಪ್ ಪ್ರದೇಶದ ರಾವತ್ ಅವರ ಮೈತ್ರಿ ಬಂಗಲೆಯ ಬಳಿ ವ್ಯಾಗನ್ಆರ್ ಕಾರು ಕಾಣಿಸಿಕೊಂಡಿದ್ದು, ಅದರ ಕಿಟಕಿಯ ಮೇಲೆ ಧೂಳಿನಿಂದ ಆವೃತವಾದ ಬೆದರಿಕೆ ಸಂದೇಶ ಬರೆಯಲಾಗಿದೆ ಎಂದು ತಿಳಿದುಬಂದಿದ್ದು, 12 ಗಂಟೆಗೆ ಬಾಂಬ್ ಸ್ಫೋಟವಾಗುತ್ತೆ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶವನ್ನು ಗಮನಿಸಿದ ರಾವತ್ ಅವರ ಬೆಂಬಲಿಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಮತ್ತು ಮುಂಬೈ ಪೊಲೀಸರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆವರಣದಲ್ಲಿ ಸಂಪೂರ್ಣ ಶೋಧ ನಡೆಸಿದ್ದು, ರಾವತ್ ಅವರ ನಿವಾಸದ ತಪಾಸಣೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ, ನಿಲ್ಲಿಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



