ಚಾಮರಾಜನಗರ: ಬಂಡೀಪುರ ಅಭಯಾರಣ್ಯಕ್ಕೆ ಅನಧಿಕೃತವಾಗಿ ಪ್ರವೇಶಿಸಿ ಫೋಟೋ ಶೂಟ್ ನಡೆಸಿದ ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ₹25,000 ದಂಡ ವಿಧಿಸಿದೆ.
ಮಂಗಲ ರಸ್ತೆ ಸಮೀಪ ಫೋಟೋ ಶೂಟ್ ನಡೆಸುತ್ತಿದ್ದಾಗ ಪ್ರವಾಸಿಗರು ವಿಡಿಯೋ ಮಾಡಿ ಎ.ಸಿ.ಎಫ್. ನವೀನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದರು.
ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಪಲ್ಲವಿ ಮತ್ತು ಘೋಷ್ ಅವರನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ.