Saturday, February 14, 2026
Google search engine

Homeಸ್ಥಳೀಯತಾಳುಬೆಟ್ಟ 4ನೇ ತಿರುವಿನಲ್ಲಿ ಯಾತ್ರಿಕರಿಗೆ ಚಿರತೆ ದರ್ಶನ

ತಾಳುಬೆಟ್ಟ 4ನೇ ತಿರುವಿನಲ್ಲಿ ಯಾತ್ರಿಕರಿಗೆ ಚಿರತೆ ದರ್ಶನ

ಚಾಮರಾಜನಗರ : ಶಿವರಾತ್ರಿಗೆ ಇನ್ನೊಂದೇ ದಿನ ಬಾಕಿ ಇರುವಾಗ ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಆತಂಕ ಎದುರಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಯಾತ್ರಿಕರಿಗೆ ಚಿರತೆ ಕಾಣಿಸಿಕೊಂಡಿದೆ.

ರಸ್ತೆಯಲ್ಲೇ ಚಿರತೆ ಕಾಣಿಸಿದ ಕಾರಣ ಮಾದಪ್ಪನ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ವಾಹನಗಳು ಓಡಾಡುತ್ತಿದ್ದರೂ ಕ್ಯಾರೆ ಎನ್ನದೇ ಕುಳಿತಿರುವ ಚಿರತೆಯ ದೃಶ್ಯ ವಾಹನ ಸವಾರರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿರುವ ಸಂದರ್ಭದಲ್ಲೇ ಚಿರತೆ ಕಾಣಿಸಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಇತ್ತೀಚೆಗಷ್ಟೇ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬನನ್ನು ಚಿರತೆ ಹೊತ್ತೊಯ್ದಿತ್ತು.

RELATED ARTICLES
- Advertisment -
Google search engine

Most Popular