Wednesday, February 11, 2026
Google search engine

Homeಅಪರಾಧಚಿತ್ರದುರ್ಗ: ಹಿರಿಯ ವೈದ್ಯರಿಗೆ 1.27 ಕೋಟಿ ವಂಚನೆ

ಚಿತ್ರದುರ್ಗ: ಹಿರಿಯ ವೈದ್ಯರಿಗೆ 1.27 ಕೋಟಿ ವಂಚನೆ

ಚಿತ್ರದುರ್ಗ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಮತ್ತು ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರಿಗೆ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಶ್ರೀನಿವಾಸ್ ಶೆಟ್ಟಿ ವಂಚನೆಗೊಳಗಾದ ವೈದ್ಯ. ವಂಚಕರು ವಾಟ್ಸಪ್ ಕಾಲ್ ಮತ್ತು ನಾರ್ಮಲ್ ಕಾಲ್ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ವೈದ್ಯರ ಖಾತೆಯಿಂದ 1.27 ಕೋಟಿ ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.

ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular