Friday, June 13, 2025
Google search engine

Homeರಾಜ್ಯಅಹಮದಾಬಾದ್ ವಿಮಾನ ಅಪಘಾತಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ

ಅಹಮದಾಬಾದ್ ವಿಮಾನ ಅಪಘಾತಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ

ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾಗಿದ್ದು, ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಅವರು, ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ವಿಚಾರ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.



RELATED ARTICLES
- Advertisment -
Google search engine

Most Popular