Friday, May 30, 2025
Google search engine

Homeರಾಜ್ಯಸುದ್ದಿಜಾಲದ.ಕ.ದಲ್ಲಿ ಕೋಮುದ್ವೇಷದ ಕೊಲೆ ಪ್ರಕರಣ: ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಲೋಪದೋಷವಿದೆ – ಐವನ್ ಡಿಸೋಜಾ

ದ.ಕ.ದಲ್ಲಿ ಕೋಮುದ್ವೇಷದ ಕೊಲೆ ಪ್ರಕರಣ: ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಲೋಪದೋಷವಿದೆ – ಐವನ್ ಡಿಸೋಜಾ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಕೊಲೆ ಪ್ರಕರಣದಲ್ಲಿ ಗುಪ್ತಚರ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲವು ಲೋಪದೋಷಗಳು ಇರುವುದನ್ನು ಜನಾಭಿಪ್ರಾಯದ ಮೇಲೆ ಒಪ್ಪಿಕೊಳ್ಳುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋಮು ಪ್ರಚೋದನಕಾರಿ ಭಾಷಣ ಮಾಡುವವರು, ಕೋಮು ಗಲಭೆಗಳಿಗೆ ಕಾರಣವಾಗುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿರುವುದು ಹೌದು ಎಂದ ಅವರು ಹೇಳಿದರು.

ಜಿಲ್ಲೆಯಲ್ಲಿ ನಡೆದ ಘಟನೆಗಳನ್ನು ನೋಡುವಾಗ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೋಮು ಶಕ್ತಿಗಳ ವಿರುದ್ಧದ ರಾಜ್ಯ ಸರಕಾರದ ದೃಷ್ಟಿಕೋನವನ್ನು ಪೊಲೀಸರು ಅರ್ಥ ಮಾಡಿಕೊಂಡಿಲ್ಲ ಅನ್ನಿಸುತ್ತಿದೆ. ಹೀಗಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ಮಾಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ನಡೆಸಿ ಮುಂದೆ ಇಂತಹ ಘಟನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular