Wednesday, June 18, 2025
Google search engine

Homeರಾಜಕೀಯಕಾಂಗ್ರೆಸ್ ಬಡವರ ಬದುಕು ಕಟ್ಟುವ ಪಕ್ಷವಾಗಿದೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಬಡವರ ಬದುಕು ಕಟ್ಟುವ ಪಕ್ಷವಾಗಿದೆ: ಪ್ರಿಯಾಂಕ್ ಖರ್ಗೆ

ಬೀದರ್: ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. ಬೀದರ್ ಸಂಸದ ಭಗವಂತ ಖುಬಾ, ಕಲಬುರಗಿ ಡಾ. ಉಮೇಶ ಜಾಧವ್, ಶಾಸಕ ಡಾ. ಅವಿನಾಶ ಜಾಧವ್ ತ್ರಿಬಲ್ ಇಂಜಿನ್ ಸರಕಾರ ಇದ್ದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಮನ್ ಕಿ ಬಾತ್ ಕೇಳಲಿಲ್ಲ.

ಕಾಂಗ್ರೆಸ್ ಪಕ್ಷ ಬಡವರ ಬದುಕು ಕಟ್ಟುವುದಾಗಿದೆ. ಆದರೆ, ಬಿಜೆಪಿ ಭಾವನಾತ್ಮಕ ವಿಚಾರ ಮೂಡಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ. ಇದಕ್ಕಾಗಿ ೫೨ ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ. ಕಾಂಗ್ರೆಸ್ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತಿದೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನೆರವು ನೀಡುವಂತೆ ಮನವಿ ಮಾಡಿದರೂ ಸಹ ರಾಜ್ಯದ ಜನರ ಹಿತ ಕಾಪಾಡಲಿಲ್ಲ ನಮ್ಮ ತೆರಿಗೆ ನಮ್ಮ ಹಕ್ಕು ಬಗ್ಗೆ ಸುಪ್ರೀಂಕೋರ್ಟ್ ಮೋರೆ ಹೋಗಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ.

ಬೀದರ್ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖುಬಾ ಏನು ಆಭಿವೃದ್ಧಿ ಸಾಧನೆ ಮಾಡಿಲ್ಲ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular