Tuesday, June 17, 2025
Google search engine

Homeರಾಜ್ಯತಮಿಳುನಾಡಿಗೆ ಮತ್ತೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಸೂಚನೆ

ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಸೂಚನೆ

ನವದೆಹಲಿ: ತಮಿಳುನಾಡಿಗೆ ಮತ್ತೆ ೨,೬೦೦ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ CWRC ಕರ್ನಾಟಕಕ್ಕೆ ಇಂದು ಸೋಮವಾರ ಸೂಚನೆ ನೀಡಿದೆ. ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ ೧೫ ದಿನಗಳ ಕಾಲ ೨,೬೦೦ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.

ಪ್ರತಿದಿನ ೩ ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ CWRC ಕರ್ನಾಟಕಕ್ಕೆ ಈ ಹಿಂದೆ ಸೂಚಿಸಿತ್ತು. ಅಕ್ಟೋಬರ್ ಅಂತ್ಯದ ವರೆಗೆ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ, ಕರ್ನಾಟಕ ಸದ್ಯ ರಾಜ್ಯದ ಜನರ, ರೈತರ ವಿರೋಧದ ಮಧ್ಯೆಯೂ ತಮಿಳುನಾಡಿಗೆ ನೀರು ಹರಿಸುತ್ತಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಈಗಲೂ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ ಮತ್ತಿತರ ಕಡೆಗಳಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ನಡೆಸುತ್ತಿವೆ.

RELATED ARTICLES
- Advertisment -
Google search engine

Most Popular