Saturday, January 10, 2026
Google search engine

HomeUncategorizedದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟ: ಐವರಿಗೆ ಗಂಭೀರ ಗಾಯ

ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟ: ಐವರಿಗೆ ಗಂಭೀರ ಗಾಯ

  • ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಭೇಟಿ

ದಾವಣಗೆರೆ : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ರಾಮನಗರದ ಎಸ್‌ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ನಡೆದಿದೆ. ಎಸ್ ಅವರು ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅವರು ಎಸ್ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ಒಟ್ಟು ೫ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರು ನಿಗಾ ವಹಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಗಾಯಾಳುಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಚಿಕಿತ್ಸೆ ನೀಡಲು ಆಯುಷ್ಮಾನ್ ತಿಳಿಸಿದರು.ಐವರ ಪೈಕಿ ಲಲಿತಮ್ಮ ಶೇ.೫೦ಕ್ಕೂ ಹೆಚ್ಚು ಗಾಯಗೊಂಡಿದ್ದು, ಸೌಭಾಗ್ಯ, ಪಾರ್ವತಮ್ಮ ಶೇ.೫೦ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಉಳಿದ ಎರಡು ೫೦% ಕ್ಕಿಂತ ಕಡಿಮೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಗಾಯಾಳುಗಳಿಗೆ ಚಿಕಿತ್ಸೆ ನೀಡುವ ಮೂಲಕ ಗಾಯಾಳುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ಉತ್ತಮ ಚಿಕಿತ್ಸೆ ನೀಡಲು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಎಸ್.ಎಸ್.ಹೈಟೆಕ್ ಆಸ್ಪತ್ರೆ ವೈದ್ಯರು ಹಾಜರಿದ್ದರು.

RELATED ARTICLES
- Advertisment -
Google search engine

Most Popular