Saturday, June 21, 2025
Google search engine

Homeರಾಜ್ಯಸುದ್ದಿಜಾಲಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ


ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹತ್ತು ಹಲವು ಕಾರ್ಯಕ್ರಮಗಳು ಮತ್ತು ತರಬೇತಿ ಶಿಬಿರಗಳನ್ನು ಹಮ್ಮಿಕೊಂಡಿದ್ದು ಎಲ್ಲರೂ ಇದರ ಪ್ರಯೋಜನ ಪಡೆದುಕೊಂಡು ನೀವೆಲ್ಲರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಮಹಿಳೆಯರಿಗೆ ನೀಡಲಾದ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು ಸ್ವಯಂ ಉದ್ಯೋಗ ಮಾಡಿಕೊಂಡು ಉತ್ತಮ ಜೀವನ ನಡೆಸಲಿ ಎಂಬ ಸದಾಶಯದಿಂದ ನಮ್ಮ ಸರ್ಕಾರ ಇಂತಹ ಕಾರ್ಯಕ್ರಮ ಜಾರಿಗೆ ತಂದಿದೆ ಎಂದರು.

ದೇಶದ ಸಮಗ್ರ ಅಭಿವೃದ್ದಿಯಾಗಬೇಕಾದರೆ ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂಚೂಣಿಗೆ ಬರಬೇಕು ಹಾಗಾಗಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಮೂಲಕ ತಾಯಂದಿರಿಗೆ ಆರ್ಥಿಕ ಶಕ್ತಿ ತುಂಬುತ್ತಿದ್ದು ಇದು ಚರಿತ್ರಾರ್ಹ ಚಿಂತನೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಮೊದಲ ಅವಧಿಯ ಐದು ವರ್ಷಗಳ ವರೆಗೂ ಪಂಚ ಗ್ಯಾರಂಟಿ ಯೋಜನೆಗಳು ಅಭಾಧಿತವಾಗಿರಲಿದ್ದು ಮುಂದಿನ ಅವಧಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ ಸಾಹೇಬರ ನಮ್ಮದೇ ಸರ್ಕಾರ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ಬಿಪಿಎಲ್ ಕುಟುಂಬಕ್ಕೆ ಮಾಸಿಕ ೪ ರಿಂದ ೫ ಸಾವಿರ ರೂ ಆರ್ಥಿಕ ಸಹಾಯ ಧನ ನೀಡುತ್ತಿದ್ದು ಇದರಿಂದ ಅವರ ಬದುಕು ಹಸನಾಗಿದೆ ಹಾಗಾಗಿ ಸದಾ ಬಡವರ ಪರವಾಗಿ ಚಿಂತಿಸುವ ಮತ್ತು ಕಾರ್ಯಕ್ರಮ ರೂಪಿಸುವವರನ್ನು ಜನತೆ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು. ಈ ಸಂಧರ್ಭದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಆಯ್ಕೆಯಾದ ೩೫ ಮಂದಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಿದ ಶಾಸಕರು ಎಲ್ಲರೂ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್.ಹೆಚ್.ನಾಗೇಂದ್ರ, ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್‌ಜಾಬೀರ್, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾರವೀಶ್, ಡಿ.ದೇವರಾಜು ಅರಸು ಅಭಿವೃದ್ದಿ ನಿಗಮದ ಸಹಾಯಕ ಅಭಿವೃದ್ದಿ ಅಧಿಕಾರಿ
ಎನ್.ರಂಗಸ್ವಾಮಿ, ತಾ.ಪಂ. ಸಹಾಯಕ ವ್ಯವಸ್ಥಾಪಕ ಕರೀಗೌಡ, ಎಸ್.ಟಿ.ಕಾಂಗ್ರೇಸ್ ಘಟಕದ ಅಧ್ಯಕ್ಷ ತಿಪ್ಪೂರು ಮಹದೇವ ನಾಯಕ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular