Monday, April 27, 2026
Google search engine

Homeಸ್ಥಳೀಯಸುಧಾಕರ್ ಆರೋಗ್ಯ ಮಾಹಿತಿ ಬಹಿರಂಗಪಡಿಸಿ : ಹೆಚ್.ಡಿ.ಕುಮಾರಸ್ವಾಮಿ

ಸುಧಾಕರ್ ಆರೋಗ್ಯ ಮಾಹಿತಿ ಬಹಿರಂಗಪಡಿಸಿ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸುಧಾಕರ್ ಅವರ ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಚಿವ‌ ಸುಧಾಕರ್ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಯಾವ ಕಾರಣಕ್ಕೆ ಕೆಲ ವಿಷಯಗಳನ್ನು ಮುಚ್ಚಿಟ್ಟಿದ್ದಾರೆ? ಅವರಿಂದ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಎಲ್ಲಾ ವಿಷಯಗಳನ್ನು ಮುಚ್ಚಿಡಲಾಗಿದೆಯೇ? ಎಂಬುದರ ಬಗ್ಗೆ ರಾಜ್ಯ ಸರ್ಕಾರ ಹೇಳಬೇಕಾಗುತ್ತದೆ ಎಂದಿದ್ದಾರೆ.

ಯಾವ ಕಾರಣಕ್ಕೆ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂಬುದನ್ನು ಜನತೆಗೆ ಹೇಳುವ ಜವಾಬ್ದಾರಿ ಸರ್ಕಾರದ್ದಾಗಿದೆ. ಇಂಥ ವಿಚಾರಗಳಲ್ಲಿ ನಾನು ಚರ್ಚೆ ಮಾಡಲ್ಲ. ಆದರೆ, ಕೆಲ ವ್ಯಕ್ತಿಗಳು ಇಂತಹ ಸಮಯವನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ ಎಕ್ಸ್ ಪರ್ಟ್ ಗಳಿದ್ದಾರೆ ಎಂದು ಹೆಚ್ ಡಿಕೆ ನುಡಿದರು.

RELATED ARTICLES
- Advertisment -
Google search engine

Most Popular