ಮೈಸೂರು: ನಗರದ ಶ್ರೀ ಕೃಷ್ಣರಾಜ ಸಹಕಾರಿ ಪ್ರಾಥಮಿಕ ಶಾಲೆಯಲ್ಲಿ ಪಾತಿ ಫೌಂಡೇಶನ್ ವತಿಯಿಂದ
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರವರ 141ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಶಾಲಾ ಮಕ್ಕಳಿಗೆ ಪುಸ್ತಕ ಲೇಖನಿಗಳು ಹಾಗೂ ಸಿಹಿ ವಿಚರಿಸಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾಜಿನಗರಪಾಲಿಕ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಆರಾಧ್ಯ ಮಹಾಸಭಾ ಉಪಾಧ್ಯಕ್ಷರಾದ ಕುಮಾರ್ ಆರಾಧ್ಯ, ಮಹೇಂದ್ರ ಆರಾಧ್ಯ, ಎಸ್ ಎನ್ ರಾಜೇಶ್, ರವಿಚಂದ್ರ, ರಾಜಕುಮಾರ್, ಎಂ ಆರ್ ಬಾಲಕೃಷ್ಣ, ಚಂದನ್, ಜಿಟ್ಟಿ ಹುಂಡಿ ಸುನಿಲ್, ಕನಕ ಮೂರ್ತಿ, ಸುಮಾ,ರೂಪ, ಶೀಲಾ ಹಾಗೂ ಇನ್ನಿತರರು ಹಾಜರಿದ್ದರು.