Friday, July 11, 2025
Google search engine

Homeಅಪರಾಧಕಾನೂನು“ಇನ್ನು ಮುಂದೆ ದ್ವೇಷ ಭಾಷಣ ನಡೆಸಬೇಡಿ”, ಅಪರಾಧ ಪುನರಾವರ್ತಿಸುವಂತಿಲ್ಲ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ...

“ಇನ್ನು ಮುಂದೆ ದ್ವೇಷ ಭಾಷಣ ನಡೆಸಬೇಡಿ”, ಅಪರಾಧ ಪುನರಾವರ್ತಿಸುವಂತಿಲ್ಲ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ. ಕೋಮು ಶಾಂತಿಯನ್ನೇ ಕದಡುವ ಉಗ್ರ ಭಾಷಣ ಮಾಡಿದ ಆರೋಪದಲ್ಲಿ ಪೂಂಜಾ ವಿರುದ್ಧದ ಎಫ್‌ಐಆರ್ ಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಅದನ್ನು ತೆರವುಗೊಳಿಸಬೇಕು ಎಂಬುದಾಗಿ ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಅರ್ಜಿ ಸಲ್ಲಿಸಿದ್ದರು.

ಪೂರ್ವದ ಭಾವನೆಗಳನ್ನು ಕೆರಳಿಸುವ, ಸಮುದಾಯ ದ್ವೇಷವನ್ನು ಉಂಟುಮಾಡುವ ರೀತಿಯ ಭಾಷಣಗಳಿಂದ ‘ಮಾಬ್ ಲಿಂಚಿಂಗ್’ ಮತ್ತು ಹತ್ಯೆಗಳಿಗೆ ಕಾರಣವಾಗುತ್ತಿದೆ ಎಂದು ವಾದಿಸಿದ ಬಾಲನ್, “ಹೈಕೋರ್ಟ್ ತಡೆಯಾಜ್ಞೆ ಆದೇಶಗಳನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಕೃಷ್ಣಕುಮಾರ್, ತಡೆಯಾಜ್ಞೆ ಮುಂದುವರೆಸಿದರೂ, ಹರೀಶ್ ಪೂಂಜಾ ಮುಂದೆ ಯಾವುದೇ ದ್ವೇಷ ಭಾಷಣ ಮಾಡಬಾರದು, ಈಗಾಗಲೇ ದಾಖಲಾಗಿರುವ ಐಪಿಸಿ ಸೆಕ್ಷನ್‌ಗಳನ್ವಯ ಅಪರಾಧ ಪುನರಾವರ್ತನೆಯಾಗಬಾರದು ಎಂದು ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.

ಶಾಸಕ ಪೂಂಜಾ ಈ ಹಿಂದೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕ್ರಿಮಿನಲ್ ಎಫ್‌ಐಆರ್‌ಗಳು ದಾಖಲಾಗಿದೆ. ತನಗೆ ಸಲ್ಲಿಕೆಯಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಪೂಂಜಾ 2025ರ ಮೇ 4ರಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಮೇ 22ರಂದು ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.

ಇದೀಗ ಈ ತಡೆಯಾಜ್ಞೆಗೆ ಕಠಿಣ ಷರತ್ತು ವಿಧಿಸಿರುವ ಹೈಕೋರ್ಟ್, ದ್ವೇಷ ಭಾಷಣದಿಂದ ಉಂಟಾಗುವ ಸಾಮಾಜಿಕ ಹಾನಿ ಬಗ್ಗೆ ನಿಷ್ಠುರ ಎಚ್ಚರಿಕೆ ನೀಡಿದ್ದು, ಪ್ರತಿನಿಧಿಗಳು ಕಾನೂನು ಪಾಲನೆಯ ಉಜ್ವಲ ಉದಾಹರಣೆಯಾಗಬೇಕು ಎಂಬ ಸಂದೇಶವನ್ನು ನೀಡಿದೆ.

RELATED ARTICLES
- Advertisment -
Google search engine

Most Popular