Sunday, June 1, 2025
Google search engine

Homeರಾಜ್ಯಸುದ್ದಿಜಾಲದ.ಕ. ಜಿಲ್ಲಾ ನೂತನ ಎಸ್ಪಿ ಅಧಿಕಾರ ಸ್ವೀಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆ:...

ದ.ಕ. ಜಿಲ್ಲಾ ನೂತನ ಎಸ್ಪಿ ಅಧಿಕಾರ ಸ್ವೀಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆ: ಡಾ. ಅರುಣ್ ಕೆ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಮಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್ ಗಳ ಚಲನವಲನಗಳ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜruಗಿಸಲಾಗುವುದು. ಸಾರ್ವಜನಿಕರು ನೇರವಾಗಿ ಮೊಬೈಲ್ ಸಂಖ್ಯೆ 9480805301 ಅಥವಾ ಕಚೇರಿ ಸಂಖ್ಯೆ 0824 2220503ಗೆ ಮಾಹಿತಿ ನೀಡಬಹುದು ಎಂದು ನೂತನ ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular