ಮಂಗಳೂರು: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ಚಾಲಕನನ್ನು ಪೊಲೀಸರು ಬಂಧಿಸಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ.
ಆರೋಪಿ ಎನ್.ಎಂ ಮಹಮ್ಮದ್ ಕಲಂದರ್ ಶಾ (೩೬), ಬಂಧಿತ ವ್ಯಕ್ತಿ. ಈತ ಯಾವುದೇ ಪರವಾನಿಗೆ ಇಲ್ಲದೇ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಿಸುತ್ತಿರುವುದನ್ನು ವಿಟ್ಲ ಠಾಣಾ ಪೊಲೀಸರು ಪತ್ತೆಹಚ್ಚಿದ್ದಾರೆ.
ಆರೋಪಿಯನ್ನು ಹಾಗೂ ರಿಕ್ಷಾದಲ್ಲಿದ್ದ ೬.೧೧೦ ಕೆ ಜಿ ತೂಕದ ಗಾಂಜಾ ಅಂದಾಜು ಮೌಲ್ಯ ೧,೩೫,೦೦೦ ರೂಪಾಯಿ, ಎರಡು ಮೊಬೈಲ್ (ಅಂದಾಜು ಮೌಲ್ಯ ೧೦೦೦ ರೂ) ಹಾಗೂ ೯೦೦ ರೂಪಾಯಿ ನಗದು, ಚಾಲಕನ ಚಾಲನಾ ಪರವಾನಿಗೆ, ೧,೬೦,೦೦೦ ಅಂದಾಜು ಮೌಲ್ಯದ ಅಟೋರಿಕ್ಷಾ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ೨,೯೬,೯೦೦/- ರೂಪಾಯಿ ಆಗಬಹುದು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ162/2023 ಲಂ; 8(c),20(b) (ii) (B) ,NDPS ACT ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.