ಬೆಳಗಾವಿ: ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಕೈಗಾರಿಕೆಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್, ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಸೂಕ್ತವಾದ ಭೂಮಿಯನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆ ಪ್ರಶ್ನಾವಳಿ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದು, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ ಹಾಗೂ ರಾಜ್ಯದಲ್ಲಿ ರಕ್ಷಣಾ ಕಾರಿಡಾರ್ಗಳನ್ನು ಸ್ಥಾಪಿಸುವ ಬಗ್ಗೆ, ಸರ್ಕಾರವು ಈ ಉದ್ದೇಶಕ್ಕಾಗಿ ಕರ್ನಾಟಕದಲ್ಲಿ ಎರಡು ವಲಯಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಹೇಳಿದ್ದು, ಒಂದು ವಲಯವು ಬೆಳಗಾವಿ, ಧಾರವಾಡ ಮತ್ತು ವಿಜಯಪುರ ನಡುವಿನ ಮಾರ್ಗ ಮತ್ತು ಎರಡನೇ ವಲಯವು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ನಡುವಿನ ಮಾರ್ಗವನ್ನು ಒಳಗೊಂಡಿದೆ ಎಂದರು.
ಈ ಬಗ್ಗೆ ಕೇಂದ್ರದ ಅನುಮೋದನೆ ಕೋರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಈಗಾಗಲೇ ಪಾಟೀಲ್ ಭೇಟಿ ಮಾಡಿದ್ದೇನೆ ಎಂದಿದ್ದು, ಇದಕ್ಕೆ ಸರ್ಕಾರವು ಕೇವಲ ಒಂದು ವಲಯವನ್ನು ಮಾತ್ರ ಗುರುತಿಸಿ, ಸುಲಭ ಅನುಮತಿಗಾಗಿ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸುವಂತೆ ಬೆಲ್ಲದ್ ಸೂಚಿಸಿದರು.
ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಸರ್ಕಾರವು ಒಂದೇ ವಲಯವನ್ನು ಪ್ರಸ್ತಾಪಿಸಿದರೆ ನಿರ್ಧಾರ ತೆಗೆದುಕೊಳ್ಳುವುದು ಸುಲಭ ಎಂದು ನನಗೆ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಕೊರತೆಯಿರುವುದರಿಂದ, ಸರ್ಕಾರವು ಈ ಪ್ರದೇಶವನ್ನು ಮಾತ್ರ ಪ್ರಸ್ತಾವನೆಗೆ ವಲಯವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಅವರಿಗೆ ವಿಶೇಷ ಪ್ರೋತ್ಸಾಹ ಧನ ನೀಡಬೇಕೆಂದು ಬೆಲ್ಲದ್ ಸರ್ಕಾರವನ್ನು ಒತ್ತಾಯಿಸಿದಾಗ, ಹೊಸ ಕೈಗಾರಿಕಾ ನೀತಿಯ ಪ್ರಕಾರ, ಸರ್ಕಾರವು ಈಗಾಗಲೇ ಈ ಪ್ರದೇಶಕ್ಕೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಪಾಟೀಲ್ ವಿವರಿಸಿದ್ದು, ಪ್ರಾದೇಶಿಕ ಅಸಮತೋಲನದ ಕುರಿತಾದ ನಂಜುಂಡಪ್ಪ ವರದಿಯ ಆಧಾರದ ಮೇಲೆ, ಸರ್ಕಾರವು ಅತ್ಯಂತ ಹಿಂದುಳಿದ ಜಿಲ್ಲೆಗಳು ಮತ್ತು ತಾಲೂಕುಗಳಿಗೆ 5% ಮತ್ತು ಹೆಚ್ಚು ಹಿಂದುಳಿದ ಜಿಲ್ಲೆಗಳು ಮತ್ತು ತಾಲೂಕುಗಳಿಗೆ 3% ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಹೇಳಿದರು.



