ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಹಾಗೂ ಜೆಡಿಎಸ್ನ ಯುವ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಆದೇಶ ಇನ್ನೂ ಮಾಧ್ಯಮಗಳಿಗೆ ದೊರಕಿಲ್ಲ.
ಚುನಾವಣೆಗೂ ಮುನ್ನ ಹಾಸನದಲ್ಲಿ ಪೆನ್ಡ್ರೈವ್ ಆತಂಕ ಸೃಷ್ಟಿಯಾಗಿದ್ದು, ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಮಹಿಳಾ ಆಯೋಗ ಪ್ರಕರಣದ ತನಿಖೆಗೆ ಸಿಐಟಿ ರಚಿಸಬೇಕೆಂದು ಒತ್ತಾಯಿಸಿದ್ದರು. ಅದರಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ನೀಡಿದೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಅವರು, ?ಸರ್ಕಾರ ಯಾವುದೇ ತನಿಖೆ ನಡೆಸಿದರೂ ನಾವು ಸ್ವಾಗತಿಸುತ್ತೇವೆ. ಜತೆಗೆ ಸ್ಪಂದಿಸುತ್ತೇವೆ. ಇದೀಗ ಸರ್ಕಾರ ಆದೇಶಿಸಿರುವ ಎಸ್ಐಟಿ ತನಿಖೆಯನ್ನೂ ಸ್ವಾಗತ ಮಾಡುತ್ತೇನೆ ಎಂದು ಎಂದು ಹೇಳಿದ್ದರು. ಇದೀಗ, ಆರು ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಆದೇಶಿಸಿರುವುದಾಗಿ ತಿಳಿದು ಬಂದಿದೆ.