Sunday, May 25, 2025
Google search engine

Homeರಾಜ್ಯಯುಗಾದಿ ಹಬ್ಬಕ್ಕೆ ಕೆಎಸ್ ​ಆರ್ ​ಟಿಸಿಯಿಂದ ಹೆಚ್ಚುವರಿ ಬಸ್

ಯುಗಾದಿ ಹಬ್ಬಕ್ಕೆ ಕೆಎಸ್ ​ಆರ್ ​ಟಿಸಿಯಿಂದ ಹೆಚ್ಚುವರಿ ಬಸ್

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ.

ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ ​​ಆರ್​ ಟಿಸಿ ಈ ಕ್ರಮಕ್ಕೆ ಮುಂದಾಗಿದೆ.  

ಏಪ್ರಿಲ್ 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಸೋಮವಾರ ಒಂದು ದಿನ ರಜೆ ಮಾಡಿದರೆ 4 ದಿನ ರಜೆ ಸಿಕ್ಕಂತಾಗುತ್ತದೆ. ಮುಂದಿನ ವಾರ, ಏಪ್ರಿಲ್ 11 ರ ಗುರುವಾರ ಮುಸ್ಲಿಮರ ಹಬ್ಬ ರಂಜಾನ್ ಸಹ ಇರಲಿದೆ. ಮತ್ತೆ ದೀರ್ಘ ವಾರಾಂತ್ಯ ರಜೆ ಸಿಗಲಿದೆ. 13 ರಂದು ಎರಡನೇ ಶನಿವಾರ ರಜೆ ಹಾಗೂ14 ರಂದು ಭಾನುವಾರ ರಜೆ‌ ಇದೆ. ಈ ಎಲ್ಲ ಕಾರಣಗಳನ್ನು ಮತ್ತು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕೆಎಸ್ ​ಆರ್ ​ಟಿಸಿ ಹೆಚ್ಚುವರಿ ಬಸ್ ನಿಯೋಜನೆ ಮಾಡಿದೆ.

ಕೆಎಸ್‌ ಆರ್‌ ಟಿಸಿಯಿಂದ 1,750ಬಸ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 145 ಬಸ್, ಕೆಕೆಆರ್‌ ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಎಲ್ಲಿಗೆಲ್ಲ ವಿಶೇಷ ಬಸ್​?

ನಗರದ ಕೆಂಪೇಗೌಡ ನಿಲ್ದಾಣ, ಸ್ಯಾಟಲೈಟ್ ನಿಲ್ದಾಣ, ಶಾಂತಿನಗರದಿಂದ ವಿಶೇಷ ಬಸ್ ಸೇವೆ ದೊರೆಯಲಿದೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿ‌ ಹಲವು ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ. ನೆರೆರಾಜ್ಯಗಳ ನಗರಗಳಾದ ಹೈದರಾಬಾದ್, ಚೆನ್ನೈ,‌ ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ.

RELATED ARTICLES
- Advertisment -
Google search engine

Most Popular