ಮೈಸೂರು: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಇಂದು ಇಂದಿರಾಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆ ನೆರೆವೇರಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು. ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.
ಎಲ್ಲರೂ ವಂತಿಗೆ ನೀಡಬೇಕು: ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ. ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಇದೇ ವೇಳೆ ಸಿಎಂ ಮನವಿ ಮಾಡಿದರು.
ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕು ಎಂದರು.