ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಸಮೀಪ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು, ಸ್ನೇಹಿತನನ್ನೇ ಕೊಲೆ ಮಾಡಲಾಗಿದೆ. ಅಸ್ಸಾಂ ಮೂಲದ ಕಾರ್ಮಿಕ ಮೋಹನ್(34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ರೆಸಾರ್ಟ್ ವೊಂದರಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಕುಡಿದು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.