ಮಂಡ್ಯ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಅಹುತಿಯಾಗಿದ್ದು ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮದಲ್ಲಿ ಹನಕೆರೆ ಗ್ರಾಪಂ ಸದಸ್ಯೆ ರಾಣಿ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.

ಅಡುಗೆ ಮಾಡಲು ಗ್ಯಾಸ್ ಸ್ಟೌವ್ಗೆ ಬೆಂಕಿ ಹೊತ್ತಿಸಿದ್ದರು. ಮನೆ ಮುಂದಿನ ಬಾಗಿಲು, ಸ್ಕೂಟರ್, ಸೈಕಲ್, ನೀರಿನ ಟ್ಯಾಂಕ್ ಹಾಗೂ ಬಟ್ಟೆಗಳು ಭಾಗಶಃ ಬೆಂಕಿಗೆ ಅಹುತಿಯಾಗಿವೆ. ಘಟನೆಯಲ್ಲಿ ಮನೆಯಲ್ಲಿದ್ದ ಮಕ್ಕಳಿಗೆ ಬೆಂಕಿಯ ತಾಪ ತಗುಲಿ ಸುಟ್ಟ ಗಾಯ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯವಾಗಿಲ್ಲ. ಹೊತ್ತಿ ಉರಿಯುತ್ತಿದ್ದ ಸಿಲಿಂಡರ್’ನ್ನು ಮನೆ ಹೊರ ತಂದು ನೀರಿಗೆ ಹಾಕಿ ಹೆಚ್ಚಿನ ಅನಾಹುತ ತಪ್ಪಿಸಿದ ಗ್ರಾಮಸ್ಥರು, ಘಟನೆಯಿಂದ ಸುಮಾರು ಒಂದು ಲಕ್ಷ ರೂ.ನಷ್ಟು ನಷ್ಟ. ಸ್ಥಳಕ್ಕೆ ಮಾಜಿ ಶಾಸಕ ಎಂ.ಶ್ರೀನಿವಾಸ್ ಭೇಟಿ. ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.
