Saturday, September 20, 2025
Google search engine

Homeರಾಜ್ಯಸುದ್ದಿಜಾಲಮೈಸೂರು ಸಹಕಾರ ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ಎಚ್. ಕೃಷ್ಣಮೂರ್ತಿ, ವಿ.ಸಿ. ಶಿವರಾಮ್ ನಾಮಪತ್ರ ಸಲ್ಲಿಕೆ

ಮೈಸೂರು ಸಹಕಾರ ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ಎಚ್. ಕೃಷ್ಣಮೂರ್ತಿ, ವಿ.ಸಿ. ಶಿವರಾಮ್ ನಾಮಪತ್ರ ಸಲ್ಲಿಕೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಅರ್.ನಗರ : ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಸಾಲಿಗ್ರಾಮ ತಾಲೂಕಿನ ಹಳಿಯೂರು ಗ್ರಾಮದ ಎಚ್.ಕೃಷ್ಣಮೂರ್ತಿ(ಕೋಳಿ ಕಿಟ್ಟಿ) ಮತ್ತು ವಡ್ಡಕೊಪ್ಪಲು ವಿ.ಸಿ. ನಾಮಪತ್ರ ಸಲ್ಲಿಸಿದರು.

ಮೈಸೂರು ಸಹಕಾರ ಯುನಿಯನ್ ಕಚೇರಿಯಲ್ಲಿ ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮ ಪತ್ರ ಸಲ್ಲಿಸಿದರು.

ಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿರುವ ಕೃಷ್ಣಮೂರ್ತಿ ಮತ್ತು ಕೆ.ಅರ್.ನಗರ ತಾಲೂಕು ಒಕ್ಕಲಿಗರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಉಪಾಧ್ಯಕ್ಷ ವಡ್ಡರಕೊಪ್ಪಲು ವಿ.ಸಿ.ಶಿವರಾಮ್ ಅವರು ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಸೂಚನೆಯ ಮೇರೆಗೆ ಈ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡ ಹಳಿಯೂರು ಮಧುಚಂದ್ರ, ಚನ್ನಂಗರೆ ಸಹಕಾರ ಸಂಘದ ಅಧ್ಯಕ್ಷ ಸಿ.ವೈ.ಅಭಿಲಾಷ್, ಸಾಲಿಗ್ರಾಮ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಗೌಡ,ಸಿದ್ದಪುರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶ್ರೀರಾಮಪುರ ಪ್ರಶನ್ನ ಇದ್ದರು.

RELATED ARTICLES
- Advertisment -
Google search engine

Most Popular