ಬೆಂಗಳೂರು: ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ₹50 ಲಕ್ಷ ಪರಿಹಾರ ಘೋಷಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವೂ ಸಹಾನುಭೂತಿ ತೋರಿಸಬೇಕು ಎಂದರು. ಈ ಸರ್ಕಾರ ಹಿಂದೂ ವಿರೋಧಿ ರಾಜಕಾರಣ ನಡೆಸುತ್ತಿದೆ, ಅಲ್ಪಸಂಖ್ಯಾತರ ಒಲೈಕೆಗೆ ಮಾತ್ರ ಯತ್ನಿಸುತ್ತಿದೆ ಎಂದು ಆರೋಪಿಸಿದರು.